ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
TSK
TSK · ನ್ಯಾಯಸ್ಥಾಪಕರು 2:4
Treasury of Scripture Knowledge references in ಕನ್ನಡ IRV.
¶ ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.
ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.