TSK

TSK · ನ್ಯಾಯಸ್ಥಾಪಕರು 4:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಯೆಹೋವನು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್ ಹಾಗೂ ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಬೈಲಿನವರೆಗೂ ಅವರನ್ನು ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.

ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.

ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.