¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
TSK
TSK · ನ್ಯಾಯಸ್ಥಾಪಕರು 4:3
Treasury of Scripture Knowledge references in ಕನ್ನಡ IRV.
ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ಮತ್ತು ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ಯಾವಾಗಲೂ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗಿ,
ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.
ಆಗ ಅವರು ಯೆಹೋವನಿಗೆ, “ನಾವು ನಮ್ಮ ದೇವರಾದ ನಿನ್ನನ್ನು ಬಿಟ್ಟು, ಬಾಳನ ಪ್ರತಿಮೆಗಳನ್ನು ಪೂಜಿಸಿ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಮೊರೆಯಿಟ್ಟರು.
“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.
ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.