TSK

TSK · ನ್ಯಾಯಸ್ಥಾಪಕರು 4:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ಪೂರ್ವಪ್ರಸಿದ್ಧವಾದ ಕೀಷೋನ್ ಹೊಳೆಯು ಶತ್ರುಗಳನ್ನು ಕೊಚ್ಚಿಕೊಂಡು ಹೋಯಿತು. ನನ್ನ ಮನವೇ ನೀನು ಧೈರ್ಯದಿಂದ ಮುಂದಕ್ಕೆ ಹೊರಡು.

ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.

ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.

ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.