ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
TSK
TSK · ನ್ಯಾಯಸ್ಥಾಪಕರು 5:3
Treasury of Scripture Knowledge references in ಕನ್ನಡ IRV.
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.
ದೆಬೋರಳಾದ ನಾನು ಇಸ್ರಾಯೇಲರಲ್ಲಿ ತಾಯಿಯಂತೆ ಎದ್ದುಬರುವವರೆಗೆ ಇಸ್ರಾಯೇಲ್ ಗ್ರಾಮಗಳು ಹಾಳುಬಿದ್ದಿದ್ದವು.
¶ ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
¶ “ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.