ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.
TSK
TSK · ನ್ಯಾಯಸ್ಥಾಪಕರು 6:3
Treasury of Scripture Knowledge references in ಕನ್ನಡ IRV.
¶ ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
¶ ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
¶ ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.
ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.