ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
TSK
TSK · ನ್ಯಾಯಸ್ಥಾಪಕರು 7:9
Treasury of Scripture Knowledge references in ಕನ್ನಡ IRV.
ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.
ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; ‹“ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,›