ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,
TSK
TSK · ನ್ಯಾಯಸ್ಥಾಪಕರು 8:33
Treasury of Scripture Knowledge references in ಕನ್ನಡ IRV.
ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಬದುಕಿದ್ದ, ಯೆಹೋವನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವನನ್ನು ಸೇವಿಸುತ್ತಿದ್ದರು.
ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲರು ಪುನಃ ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಸೇವಿಸಿ, ಅವುಗಳಿಗೆ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನು, ಮೊಂಡತನಗಳನ್ನು ಬಿಡಲೇ ಇಲ್ಲ.
ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.
ಆ ಊರಿನವರು ಒಂದಾನೊಂದು ದಿನ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು, ಆಲೆಗಳಲ್ಲಿ ರಸತೆಗೆದು, ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ, ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
¶ ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
¶ ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.
ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.