TSK

TSK · ನ್ಯಾಯಸ್ಥಾಪಕರು 9:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.

ಮತ್ತು ಅವರು ಬಾಳ್‍ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಕಾಕಪೋಕರನ್ನು ಕೂಡಿಸಿ,

ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.

ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.

ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.