TSK

TSK · ಪ್ರಲಾಪಗಳು 1:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ನೀವೂ, ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ಆತನಿಗೆ ವಿಧೇಯರಾಗಿ, ಆತನನ್ನು ಸೇವಿಸುತ್ತಾ, ತಪ್ಪದೆ ಆತನ ಮಾತನ್ನು ಪಾಲಿಸುವವರಾಗಿ, ಆತನನ್ನೇ ಹೊಂದಿಕೊಂಡಿರುವುದಾದರೆ ಎಷ್ಟೋ ಒಳ್ಳೆಯದು.

ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,

ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.

ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.

ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.

ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಕರ್ತನೇ, ನೀನು ಧರ್ಮಸ್ವರೂಪನು, ನಾವೋ ನಾಚಿಕೆಗೆ ಈಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇಮಿನ ನಿವಾಸಿಗಳೂ ನಿನ್ನ ವಿರುದ್ಧವಾಗಿ ಮಾಡಿದ ದ್ರೋಹದ ನಿಮಿತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ, ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲರೂ ನಾಚಿಕೆಗೆ ಈಡಾಗಿದ್ದಾರೆ.

ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.

ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.

ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.