TSK

TSK · ಪ್ರಲಾಪಗಳು 1:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ

ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,

ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.

ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.

ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.

¶ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!

ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಊರ ಹೊರಗೆ ಖಡ್ಗ, ಊರೊಳಗೆ ವ್ಯಾಧಿ ಮತ್ತು ಕ್ಷಾಮಗಳು; ಹೊರಗಿರುವವರು ಖಡ್ಗದಿಂದ ಸಾಯುವರು, ಒಳಗಿರುವವರು ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು.

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.

‹ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.›