¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
TSK
TSK · ಪ್ರಲಾಪಗಳು 1:6
Treasury of Scripture Knowledge references in ಕನ್ನಡ IRV.
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,
ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”
¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.
ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,
ಪಟ್ಟಣಗಳನ್ನು ಹಿಡಿದಿದ್ದಾನೆ, ಕೋಟೆಗಳನ್ನು ಆಕ್ರಮಿಸಿದ್ದಾನೆ; ಆ ದಿನಗಳಲ್ಲಿ ಮೋವಾಬಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.
ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
¶ ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!