TSK

TSK · ಪ್ರಲಾಪಗಳು 1:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.

ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.

“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.

¶ ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.

ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.

“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.

ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.

¶ ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’

ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.

ನಿನಗೆ ಈ ಎರಡು ಬಾಧೆಗಳು ಬಂದಿವೆ, ನಿನಗೋಸ್ಕರ ಸಂತಾಪವನ್ನು ತೋರಿಸುವವರು ಯಾರಿದ್ದಾರೆ? ನಾಶವೋ, ಸಂಹಾರವೋ, ಕ್ಷಾಮವೋ, ಶಕ್ತಿಯೋ. ನಾನು ನಿನ್ನನ್ನು ಹೇಗೆ ಸಂತೈಸಲಿ?

ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.

ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.

ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.

ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.

ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!

ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

“ಆಹಾ, ನಾನು ಅವಳನ್ನು ಒಲಿಸಿ, ಅಡವಿಗೆ ಕರೆದುಕೊಂಡು ಹೋಗಿ, ಅವಳೊಂದಿಗೆ ಹೃದಯಂಗಮವಾಗಿ ಮಾತನಾಡುವೆನು.

ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?