ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
TSK
TSK · ಪ್ರಲಾಪಗಳು 2:14
Treasury of Scripture Knowledge references in ಕನ್ನಡ IRV.
ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
¶ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು.
ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ, ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ.
ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.
‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.