TSK

TSK · ಪ್ರಲಾಪಗಳು 2:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.

ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.

ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.

ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು, ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.

ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.

ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.

ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.

ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.

¶ ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

¶ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.

¶ ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.