ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
TSK
TSK · ಪ್ರಲಾಪಗಳು 2:22
Treasury of Scripture Knowledge references in ಕನ್ನಡ IRV.
ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ.
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
ಮರುದಿನ ಪಷ್ಹೂರನು ಯೆರೆಮೀಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ ಹೀಗೆ ಹೇಳಿದನು, “ಯೆಹೋವನು ನಿನ್ನ ಹೆಸರನ್ನು ಪಷ್ಹೂರ್ ಎಂದು ಹೇಳದೆ ಮಾಗೋರ್ ಮಿಸ್ಸಾಬೀಬ್ ಎಂದು ಹೇಳಿದ್ದಾನೆ.
ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
‹ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.›