TSK

TSK · ಪ್ರಲಾಪಗಳು 2:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?

ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.

ನಾನು ನೆಮ್ಮದಿಯಿಂದಿದ್ದಾಗ ಆತನು ನನ್ನನ್ನು ಒಡೆದು ಹಾಕಿದನು; ಕತ್ತುಹಿಡಿದು ನನ್ನನ್ನು ಚೂರು ಚೂರು ಮಾಡಿದನು. ಬಾಣ ಪ್ರಯೋಗಿಸಲು ನನ್ನನ್ನು ಗುರಿಮಾಡಿಕೊಂಡಿದ್ದಾನೆ.

ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.

ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.

ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.

ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.

ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.

ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

¶ “ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.

ಅವರು ಕೊಂಬನ್ನೂದಿ ಎಲ್ಲವನ್ನೂ ಸಿದ್ಧ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡುವುದಿಲ್ಲ; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.

ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”

ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.

¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.