ಅದಕ್ಕೆ ಫರೋಹನು, “ನಾನು ನಿಮ್ಮನ್ನು ಮತ್ತು ನಿಮ್ಮ ಮಕ್ಕಳನ್ನು ಹೋಗುವುದಕ್ಕೆ ಅಪ್ಪಣೆ ಕೊಡುವುದಿಲ್ಲ; ಕಳುಹಿಸಿಕೊಟ್ಟರೆ, ಯೆಹೋವನು ನಿಮ್ಮ ಸಂಗಡವಿರುವನು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು.
TSK
TSK · ಪ್ರಲಾಪಗಳು 3:37
Treasury of Scripture Knowledge references in ಕನ್ನಡ IRV.
¶ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
“ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
¶ “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.