ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.
TSK
TSK · ಪ್ರಲಾಪಗಳು 3:42
Treasury of Scripture Knowledge references in ಕನ್ನಡ IRV.
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
ಸ್ವಾಮೀ, ನಿನ್ನ ವಿರುದ್ಧವಾಗಿ ಪಾಪ ಮಾಡಿದ್ದರಿಂದ ನಾವೂ ನಮ್ಮ ಅರಸರೂ, ಪ್ರಧಾನರೂ, ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.
“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
‹ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.›