TSK

TSK · ಪ್ರಲಾಪಗಳು 3:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?

ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.

ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.

ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.

ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.

ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.