TSK

TSK · ಪ್ರಲಾಪಗಳು 4:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.

ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.

ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.

ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.

ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.

ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.

‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ.