ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
TSK
TSK · ಪ್ರಲಾಪಗಳು 4:2
Treasury of Scripture Knowledge references in ಕನ್ನಡ IRV.
“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.
ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.
ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
¶ ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.