¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
TSK
TSK · ಪ್ರಲಾಪಗಳು 4:20
Treasury of Scripture Knowledge references in ಕನ್ನಡ IRV.
ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.
ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.
ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ
ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
¶ ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡುವುದಿಲ್ಲ.
ಜನಾಂಗಗಳು ಈ ವಾರ್ತೆಯನ್ನು ಕೇಳಿ, ಅದಕ್ಕೆ ಗುಂಡಿ ತೋಡಲು ಅದು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತ ದೇಶಕ್ಕೆ ಒಯ್ದರು.
ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು.