TSK

TSK · ಪ್ರಲಾಪಗಳು 4:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.

ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ.

¶ ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.

ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.

“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.

“ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ, ಹೊಟ್ಟೆಕಿಚ್ಚಿಗೂ ನಾನು ನಿನ್ನ ವಿರುದ್ಧವಾಗಿ ನ್ಯಾಯ ತೀರಿಸಿದ ಮೇಲೆ, ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

¶ ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.

ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.

‹“ಇಗೋ›‹ಕಳ್ಳನು ಬರುವಂತೆ ಬರುತ್ತೇನೆ.›‹ತಾನು›‹ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ›‹ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”›