¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
TSK
TSK · ಪ್ರಲಾಪಗಳು 5:17
Treasury of Scripture Knowledge references in ಕನ್ನಡ IRV.
ದುಃಖದಿಂದ ನನ್ನ ಕಣ್ಣು ಮೊಬ್ಬಾಗಿದೆ, ನನ್ನ ಅಂಗಗಳೆಲ್ಲಾ ನೆರಳಿನಂತೆ ನಿಸ್ಸಾರವಾಗಿವೆ.
ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.
ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.
ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!