ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
TSK
TSK · ಪ್ರಲಾಪಗಳು 5:7
Treasury of Scripture Knowledge references in ಕನ್ನಡ IRV.
‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.
ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,
ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”
ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.
“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?