TSK

TSK · ಯಾಜಕಕಾಂಡ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು.

ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.

ಅವನು ಆ ಹೋರಿಯನ್ನು ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ತಂದು, ಅದರ ತಲೆಯ ಮೇಲೆ ಕೈಯನ್ನಿಟ್ಟು, ಯೆಹೋವನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.

ಅವನು (ಅಭಿಷಿಕ್ತ ಯಾಜಕ) ದೋಷಪರಿಹಾರಕ ಯಜ್ಞದ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲ್ಪಟ್ಟಿತೋ, ಇದರ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದನಂತರ ಅವರಿಗೆ ಕ್ಷಮಾಪಣೆಯಾಗುವುದು.

ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲಾ ಕೊಬ್ಬನ್ನು ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು.

¶ ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.

¶ ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.

ಅವನು ಪವಿತ್ರ ಸ್ಥಳದ ಪ್ರಾಕಾರದಲ್ಲಿ ಸ್ನಾನಮಾಡಿ, ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನಗಾಗಿಯೂ ಮತ್ತು ಜನಸಮೂಹಕ್ಕಾಗಿಯೂ ಸರ್ವಾಂಗಹೋಮಗಳನ್ನು ಸಮರ್ಪಿಸಿ, ತನಗಾಗಿಯೂ ಮತ್ತು ಜನರಿಗಾಗಿಯೂ ದೋಷಪರಿಹಾರ ಮಾಡಬೇಕು.

“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.

ಯಾಜಕನು ಇಸ್ರಾಯೇಲರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದುದರಿಂದ ಮತ್ತು ಅವರು ಅದನ್ನು ಪರಿಹರಿಸುವುದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಸರ್ವಾಂಗ ಹೋಮವನ್ನೂ, ದೋಷಪರಿಹಾರಕ ಯಜ್ಞವನ್ನೂ ಮಾಡಿಸಿದ್ದರಿಂದ,

ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.

ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಇನ್ನೂರು ಕುರಿಗಳಲ್ಲಿ ಇಸ್ರಾಯೇಲಿನ ನೀರಾವರಿಯ ಹುಲ್ಗಾವಲಿನ ಒಂದು ಕುರಿ; ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಸರ್ವಾಂಗಹೋಮ ಮತ್ತು ಸಮಾಧಾನಬಲಿಯಾಗಿ ಒಪ್ಪಿಸಬೇಕು” ಇದು ಕರ್ತನಾದ ಯೆಹೋವನ ನುಡಿ.

ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.

¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.