ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.
TSK
TSK · ಯಾಜಕಕಾಂಡ 10:1
Treasury of Scripture Knowledge references in ಕನ್ನಡ IRV.
¶ ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.
¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
¶ ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,
¶ ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
¶ ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,
ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.
ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು,
ಮೋಶೆಯು ಆರೋನನಿಗೆ, “ಯೆಹೋವನ ಕೋಪದಿಂದ ಈ ಜನರೊಳಗೆ ಘೋರವ್ಯಾಧಿಯು ಪ್ರಾರಂಭವಾಯಿತು. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಯಜ್ಞವೇದಿಯಿಂದ ಕೆಂಡಗಳನ್ನು ಇಟ್ಟು ಧೂಪಹಾಕಿ, ಸಮೂಹದವರ ಬಳಿಗೆ ಬೇಗ ಹೋಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು” ಎಂದು ಹೇಳಿದನು.
ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿ ಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ, ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ” ಎಂಬುದೇ.
¶ “ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,
ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು.
¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.