ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
TSK
TSK · ಯಾಜಕಕಾಂಡ 10:12
Treasury of Scripture Knowledge references in ಕನ್ನಡ IRV.
¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ.
ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ ಅಥವಾ ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಸಮರ್ಪಿಸುವ ಯಾಜಕನಿಗೆ ಆಗಬೇಕು.
ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.
ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.