TSK

TSK · ಯಾಜಕಕಾಂಡ 10:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.

ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.

ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.

ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.

ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.

ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.