ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.
TSK
TSK · ಯಾಜಕಕಾಂಡ 10:3
Treasury of Scripture Knowledge references in ಕನ್ನಡ IRV.
ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.
“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.
ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.
ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.
ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು.
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.
ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
¶ ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.
‹ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ”› ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
‹ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.›
ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?