ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.
TSK
TSK · ಯಾಜಕಕಾಂಡ 11:8
Treasury of Scripture Knowledge references in ಕನ್ನಡ IRV.
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
‹ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ”› ಅಂದನು.
‹ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ”› ಎಂದು ಹೇಳಿದನು.
ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ ಪದಾರ್ಥಗಳಿಗೆ ಅನುಸಾರವಾಗಿದೆ.