TSK

TSK · ಯಾಜಕಕಾಂಡ 14:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಜಕನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಮಹಾಪವಿತ್ರಸ್ಥಾನದ ಮುಂದಿನ ತೆರೆಯ ಎದುರಾಗಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.

ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.

ಯಾಜಕನು ಪರೀಕ್ಷಿಸುವಾಗ ಆ ಮಚ್ಚೆಯು ಬೆಳ್ಳಗಾಗಿಹೋಗಿದ್ದರೆ ಆ ಮನುಷ್ಯನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ಶುದ್ಧನೇ.

ಆಗ ಅವನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.

ಆ ಹೋತ ಅವರ ಎಲ್ಲಾ ಪಾಪಗಳನ್ನು ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಪ್ರದೇಶಕ್ಕೆ ಹೋಗುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.

ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.

ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.

ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.

ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.

ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,

ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು.

ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.

ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.