TSK

TSK · ಯಾಜಕಕಾಂಡ 16:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.

ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.

ಆದರೆ ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು.

ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.