TSK

TSK · ಯಾಜಕಕಾಂಡ 16:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.

ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಆದರೆ ದೋಷಪರಿಹಾರಕ ಯಜ್ಞಪಶುಗಳಲ್ಲಿ ಯಾವ ಪಶುವಿನ ರಕ್ತವನ್ನು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ, ಪವಿತ್ರ ಸ್ಥಾನದೊಳಗೆ ತಂದಿರುವರೋ ಅದರ ಮಾಂಸವನ್ನು ತಿನ್ನಲೇಬಾರದು. ಬೆಂಕಿಯಲ್ಲಿ ಸುಟ್ಟುಬಿಡಬೇಕು.

ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.