TSK

TSK · ಯಾಜಕಕಾಂಡ 16:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು.

¶ “ಆರೋನನು ತನಗಾಗಿ ದೋಷಪರಿಹಾರಕ ಯಜ್ಞದ ಹೋರಿಯನ್ನು ಸಮರ್ಪಿಸಿ ತನಗಾಗಿಯೂ ಮತ್ತು ತನ್ನ ಮನೆತನದವರಿಗಾಗಿಯೂ ದೋಷಪರಿಹಾರವನ್ನು ಮಾಡಬೇಕು.

ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.