TSK

TSK · ಯಾಜಕಕಾಂಡ 17:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.

ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

¶ ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು.

ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?

‹ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ.›‹ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು›

ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.

ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.