¶ “‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
TSK
TSK · ಯಾಜಕಕಾಂಡ 19:31
Treasury of Scripture Knowledge references in ಕನ್ನಡ IRV.
¶ “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
ಆದುದರಿಂದ ಅವನು ತನ್ನ ಸೇವಕರಿಗೆ, “ಸತ್ತವರಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ. ನಾನು ಆಕೆಯ ಹತ್ತಿರ ಹೋಗಿ ವಿಚಾರಿಸುವೆನು” ಎಂದು ಹೇಳಿದನು. ಆಗ ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ” ಅಂದರು.
ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು, ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.
¶ ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
¶ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,