ಯಾಜಕಕಾಂಡ 19:15
TSK
¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
TSK
Treasury of Scripture Knowledge references in ಕನ್ನಡ IRV.
¶ “‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.
ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ