TSK

TSK · ಯಾಜಕಕಾಂಡ 2:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.

¶ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

¶ “‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.

ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.

ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.

ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.

ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.

¶ ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.

ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.

“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಯೇಸು ಅವರಿಗೆ ‹“ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ›‹ಬಾಯಾರಿಕೆಯಾಗುವುದಿಲ್ಲ.›

ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.

¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.