ಅವಳ ತಂದೆ ಅವಳನ್ನು ಅವನಿಗೆ ಕೊಡುವುದಕ್ಕೆ ಒಪ್ಪದೇ ಹೋದರೆ ಆ ಮನುಷ್ಯನು ತಕ್ಕ ಹಣವನ್ನು ದಂಡವಾಗಿ ಕೊಡಬೇಕು.
TSK
TSK · ಯಾಜಕಕಾಂಡ 20:6
Treasury of Scripture Knowledge references in ಕನ್ನಡ IRV.
¶ “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
¶ “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
¶ ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
¶ “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
ನನ್ನ ಜನರು ತಮ್ಮ ಮರದ ತುಂಡನ್ನು ಹಿಡಿದು ಕಣಿಕೇಳುತ್ತಾರೆ, ಅವರು ಮರದ ತುಂಡಿನಿಂದ ಪರಿಹಾರ ನಿರೀಕ್ಷಿಸುತ್ತಾರೆ. ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.