ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.
TSK
TSK · ಯಾಜಕಕಾಂಡ 23:13
Treasury of Scripture Knowledge references in ಕನ್ನಡ IRV.
¶ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
¶ “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.
ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.