¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.
TSK
TSK · ಯಾಜಕಕಾಂಡ 23:17
Treasury of Scripture Knowledge references in ಕನ್ನಡ IRV.
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”
ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
¶ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.
ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”›
¶ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.