TSK

TSK · ಯಾಜಕಕಾಂಡ 23:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.

¶ ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”

ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.

ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.

ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.

ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.

¶ ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.