TSK

TSK · ಯಾಜಕಕಾಂಡ 23:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.

ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.

‹ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.›

ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.