TSK

TSK · ಯಾಜಕಕಾಂಡ 23:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

¶ “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.

ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.

ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.