ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
TSK
TSK · ಯಾಜಕಕಾಂಡ 24:2
Treasury of Scripture Knowledge references in ಕನ್ನಡ IRV.
“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
¶ ‹“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು›‹ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.›
¶ ‹“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.›
¶ ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
¶ ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.