TSK

TSK · ಯಾಜಕಕಾಂಡ 24:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.

ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.

¶ ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

¶ ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

‹ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?”› ಎಂದು ನುಡಿಯುತ್ತಾ,