TSK

TSK · ಯಾಜಕಕಾಂಡ 25:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.

¶ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.

ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.

ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.

ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.

ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.

ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.

ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”

ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.

ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.

ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.

ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.

“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.

ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ ಮತ್ತು ಅಸಹ್ಯಕರವಾದ ಕಿರಿಯಳತೆ ಇವು ಇನ್ನೂ ಸಿಕ್ಕುತ್ತವೆಯೋ?

ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.