ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.
TSK
TSK · ಯಾಜಕಕಾಂಡ 25:19
Treasury of Scripture Knowledge references in ಕನ್ನಡ IRV.
ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
ನನ್ನ ಮಾತಿಗೆ ಕಿವಿಗೊಡುವವನಾದರೋ ಸುರಕ್ಷಿತನಾಗಿದ್ದು, ಯಾವ ಕೇಡಿಗೂ ಭಯಪಡದೆ ನೆಮ್ಮದಿಯಾಗಿ ಬಾಳುವನು” ಎಂಬುದೇ.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
¶ “‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.